-->
ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ: ಸಚಿವರಿಗೆ ಅಧಿಕಾರ ನೀಡಿ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ





ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಇದೀಗ ಮಾರ್ಗಸೂಚಿ ಕುರಿತು ಮತ್ತೊಂದು ಪ್ರಕಟಣೆ ಹೊರಡಿಸಿದೆ.



2022-23ನೇ ಸಾಲಿಗೆ ಗ್ರೂಪ್ ಎ.ಬಿ.ಸಿ. ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿ ಈ ಆದೇಶ ಹೊರಡಿಸಿದೆ.



ಮೇ 1 ರಿಂದ ಮೇ 15 ರ ಒಳಗೆ ಸಾರ್ವಜನಿಕ ವರ್ಗಾವಣೆ ಮುಗಿಸಬೇಕೆಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವರ್ಗಾವಣೆ ಕೈಗೊಳ್ಳಲು ಸಂಬಂಧ ಪಟ್ಟ ಸಚಿವರಿಗೆ ಅಧಿಕಾರ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಈ ಅಧಿಸೂಚನೆ ಹೊರಡಿಸಿದ್ದಾರೆ.



ಎಲ್ಲಾ ಇಲಾಖೆಯ ಎ.ಬಿ.ಸಿ ಮತ್ತು ಡಿ ವರ್ಗದ ಅಧಿಕಾರಿಗಳು ಹಾಗೂ ನೌಕರರಿಗೆ ಅನ್ವಯವಾಗುವಂತೆ ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರಬಾರದುವ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.



ಈ ಮೊದಲು ಮೇ ಮತ್ತು ಜೂನ್ ತಿಂಗಳಲ್ಲಿ ಶೇ.4-5 ರಷ್ಟು ನೌಕರರ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. 2020-21ನೇ ಸಾಲಿನಿಂದ ಶೇ.6 ರಷ್ಟು ಮೀರದಂತೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.



(ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಸೇನೌಬ 2022 ಬೆಂಗಳೂರು ದಿನಾಂಕ 30-04-2022)

(ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌಬ 2013 ಬೆಂಗಳೂರು ದಿನಾಂಕ 07-06-2013)

Ads on article

Advertise in articles 1

advertising articles 2

Advertise under the article