-->
ನೂತನ ಮೀಸಲಾತಿ ಆಧ್ಯಾದೇಶ: ನೇರ ನೇಮಕಾತಿ, ಮುಂಬಡ್ತಿಗೆ ರಾಜ್ಯ ಸರ್ಕಾರ ತಡೆ

ನೂತನ ಮೀಸಲಾತಿ ಆಧ್ಯಾದೇಶ: ನೇರ ನೇಮಕಾತಿ, ಮುಂಬಡ್ತಿಗೆ ರಾಜ್ಯ ಸರ್ಕಾರ ತಡೆ

ನೂತನ ಮೀಸಲಾತಿ ಆಧ್ಯಾದೇಶ: ನೇರ ನೇಮಕಾತಿ, ಮುಂಬಡ್ತಿಗೆ ರಾಜ್ಯ ಸರ್ಕಾರ ತಡೆ




ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ಪ್ರಮಾಣಕ್ಕೆ ಅನುಗುಣವಾಗಿ ರೋಸ್ಟರ್ ಬಿಂದುಗಳನ್ನು ಗುರುತಿಸುವವರೆಗೂ ನೇರ ನೇಮಕಾತಿ ಮತ್ತು ಭಡ್ತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.



ಈ ಬಗ್ಗೆ 17-11-2022ರಂದು ಟಿಪ್ಪಣಿ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಲ್ಲ ಇಲಾಖೆಗಳಲ್ಲಿ ನೇರ ನೇಮಕಾತಿ ಮತ್ತು ಭಡ್ತಿ ಪ್ರಕ್ರಿಯೆಯನ್ನು ತಡೆ ಹಿಡಿಯುವಂತೆ ಸೂಚಿಸಿದ್ದಾರೆ.



ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ:29:ಶಾಸನ:2022 Dated 23-10-2022ರ ಮೂಲಕ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು ಅಧ್ಯಾದೇಶ -2022 Dated 1-11-2022 ರಿಂದ ಜಾರಿಗೊಳಿಸಲಾಗಿದೆ. 



ಇದರ ಅನ್ವಯ ರಾಜ್ಯಾಧೀನ ಸೇವೆಗಳಲ್ಲಿ ನೇರ ನೇಮಕಾತಿ ಮತ್ತು ಪದೋನ್ನತಿಯಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. 



ಈ ಪ್ರಕ್ರಿಯೆ ಅಂತಿಮಗೊಂಡು ಪ್ರಕಟವಾಗುವ ವರೆಗೆ ಈ ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗೆ ಸಂಬಂಧಿಸಿ ಇಲಾಖಾ ಮುಂಬಡ್ತಿ ಸಭೆಯನ್ನು ನಡೆಸಬಾರದು ಎಂದು ಟಿಪ್ಪಣಿಯಲ್ಲಿ ಸೂಚಿಸಲಾಗಿದೆ.



ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ರವಾನಿಸಲಾಗಿದೆ.



ಟಿಪ್ಪಣಿ: ಮು.ಕಾ./502089/2022 Dated 17-11-2022



Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200