-->
ವಿವಿ ಪ್ರಾಧ್ಯಾಪಕರಿಂದ ಅತ್ಯಾಚಾರ: ಅನ್ವಯವಿಲ್ಲದ ಸೆಕ್ಷನ್‌ಗಳ ಮೇಲೆ FIR ದಾಖಲು- ಆರೋಪ ಮುಕ್ತಗೊಳಿಸಿದ ಹೈಕೋರ್ಟ್‌

ವಿವಿ ಪ್ರಾಧ್ಯಾಪಕರಿಂದ ಅತ್ಯಾಚಾರ: ಅನ್ವಯವಿಲ್ಲದ ಸೆಕ್ಷನ್‌ಗಳ ಮೇಲೆ FIR ದಾಖಲು- ಆರೋಪ ಮುಕ್ತಗೊಳಿಸಿದ ಹೈಕೋರ್ಟ್‌

ವಿವಿ ಪ್ರಾಧ್ಯಾಪಕರಿಂದ ಅತ್ಯಾಚಾರ: ಅನ್ವಯವಿಲ್ಲದ ಸೆಕ್ಷನ್‌ಗಳ ಮೇಲೆ FIR ದಾಖಲು- ಆರೋಪ ಮುಕ್ತಗೊಳಿಸಿದ ಹೈಕೋರ್ಟ್‌





ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಆರೋಪಕ್ಕೆ ಗುರಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ವೇದವ ಅವರನ್ನು ಕರ್ನಾಟಕ ಹೈಕೋರ್ಟ್ ಆರೋಪ ಮುಕ್ತಗೊಳಿಸಿದೆ.



ಮೇಲ್ಮನವಿದಾರರಾದ ವಿವಿ ಸಹಾಯಕ ಪ್ರಾಧ್ಯಾಪಕರು ದೂರುದಾರೆ/ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅವರ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನುವುದು ಅವರ ಮೇಲಿನ ಆರೋಪ.



ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಗೆ ಸಮನ್ಸ್‌ ಜಾರಿಗೊಳಿಸಿತ್ತು. ಆರೋಪಪಟ್ಟಿಯಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲದ ಕಾರಣ ತನ್ನ ಮೇಲಿನ ಆರೋಪದಿಂದ ಮುಕ್ತಗೊಳಿಸುವಂತೆ ಆರೋಪಿ ವೇದವ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ವೇದವ ಹೈಕೋರ್ಟ್ ಮೆಟ್ಟಿಲೇರಿದ್ದರು.



ವೇದವ ಅವರ ಈ ಅರ್ಜಿಯ ವಿಚಾರಣೆ ನಡೆಸಿದ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದ್ದು, ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2017ರ ಜೂನ್‌ 9ರಂದು ನೀಡಿದ್ದ ಆದೇಶವನ್ನು ಬದಿಗೆ ಸರಿಸಲಾಗಿದೆ.



ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 376 ಮತ್ತು 506ರ ಅಡಿ ದಾಖಲಾಗಿರುವ ಪ್ರಕರಣದಿಂದ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗಿದೆ.

ಸಂತ್ರಸ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ ಆಕೆಯ ಜೊತೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ ಎಂಬುದು ಪ್ರಕರಣದ ಸಾರಾಂಶ. 



ಈ ಆರೋಪಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಎಲ್ಲೂ ವಿವರಣೆ ಇಲ್ಲ. ಆರೋಪಿ ಅರ್ಜಿದಾರರು ಬಲಪ್ರಯೋಗದಿಂದ ದೂರುದಾರ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಐಪಿಸಿ ಸೆಕ್ಷನ್‌ 376, 506 ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.



ಡಾ. ವೇದವ 2013ರ ಜೂನ್‌ 2ರಂದು ವಿದ್ಯಾರ್ಥಿನಿಯ ಜೊತೆ ಬಲವಂತವಾಗಿ ಲೈಂಗಿಕ ಸಂಬಂಧ ಬೆಳೆಸಿದ್ದರು ಎಂದು ದೂರಲಾಗಿದೆ. ಆದರೆ, ಈ ಪ್ರಕರಣದ ಎಫ್‌ಐಆರ್ ದಾಖಲಾದದ್ದು 2014ರ ಅಕ್ಟೋಬರ್‌ 16ರಂದು. ಈ ಅವಧಿಯುದ್ದಕ್ಕೂ ದೂರುದಾರು ಮತ್ತು ಅರ್ಜಿದಾರರು ಪರಸ್ಪರ ಸಂಬಂಧದಲ್ಲಿದ್ದರು ಎಂಬ ಪೂರ್ವಭಾವನೆಯಾಗಿದೆ.

ಈ ಇಬ್ಬರು ನಡುವಿನ ಬಾಂಧವ್ಯದ ಸಂಬಂಧ ಹದಗೆಟ್ಟಾಗ ದೂರುದಾರೆ ತನ್ನ ಪ್ರತೀಕಾರ ತೀರಿಸಿಕೊಳ್ಳುವ ದುರುದ್ದೇಶದಿಂದ ಈ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ, ಡಾ. ವೇದವ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.


ಡಾ. ಧ್ರುವಂ ಡಾ. ಮುರಳೀಧಾರ್ ಸೋನಾರ್ Vs ಮಹಾರಾಷ್ಟ್ರ ಪ್ರಕರಣ ಮತ್ತು ಶಂಭೂ ಕಾರ್ವಾರ್‌ Vs ಉತ್ತರ ಪ್ರದೇಶ ಪ್ರಕರಣಗಳಲ್ಲಿ ನೀಡಲಾದ ತೀರ್ಪನ್ನು ಉಲ್ಲೇಖಿಸಿದ ಕರ್ನಾಟಕ ಹೈಕೋರ್ಟ್ ಈ ಮಹತ್ವದ ಆದೇಶವನ್ನು ಜಾರಿಗೊಳಿಸಿದೆ.



ಪ್ರಕರಣದ ವಿವರ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾದ ವೇದವ ಆಗಿಂದಾಗ್ಗೆ ದೂರುದಾರ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡುತ್ತಿದ್ದರು. 2013ರ ಆಗಸ್ಟ್‌ 2ರಂದು ದೂರುದಾರರು ಮನೆಯಲ್ಲಿ ಒಬ್ಬರೇ ಇದ್ದಾಗ ಆಕೆಯ ಜೊತೆ ಬಲವಂತದಿಂದ ಲೈಂಗಿಕ ಕ್ರಿಯೆ ನಡೆಸಿದ್ದರು.



ಈ ಘಟನೆಯನ್ನು ಯಾರಿಗೂ ಹೇಳದಂತೆ, ಒಂದೊಮ್ಮೆ ಹೇಳಿದರೆ ರೌಡಿಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಮತ್ತೆ, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ, ಬಲವಂತದಿಂದ ಲೈಂಗಿಕ ಕ್ರಿಯೆ ನಡೆಸಿದ್ದರು ಎನ್ನುವುದು ವೇದವ ಅವರ ಮೇಲಿದ್ದ ಆರೋಪ. ಈ ಅಪರಾಧಕ್ಕಾಗಿ ಸಂಜ್ಞೇಯ ಪರಿಗಣಿಸಲಾಗಿತ್ತು. ಇದನ್ನು ಪ್ರಶ್ನಿಸಿ ವೇದವ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ಮಾನ್ಯ ಮಾಡಿದೆ.




Ads on article

Advertise in articles 1

advertising articles 2

Advertise under the article