-->
ಚೆಕ್ ಬೌನ್ಸ್ ಪ್ರಕರಣ: ಜಾಲಪ್ಪ ಪುತ್ರ, ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಚೆಕ್ ಬೌನ್ಸ್ ಪ್ರಕರಣ: ಜಾಲಪ್ಪ ಪುತ್ರ, ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಚೆಕ್ ಬೌನ್ಸ್ ಪ್ರಕರಣ: ಜಾಲಪ್ಪ ಪುತ್ರ, ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ





ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಹಿರಿಯ ರಾಜಕೀಯ ಮುತ್ಸದ್ದಿ ಆರ್.ಎಲ್. ಜಾಲಪ್ಪ ಅವರ ಪುತ್ರ, ಮಾಜಿ ಶಾಸಕ ಜೆ. ನರಸಿಂಹ ಸ್ವಾಮಿ ಅವರಿಗೆ ನ್ಯಾಯಾಲಯ ದಂಡ ಮತ್ತು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ವೈದ್ಯಕೀಯ ಸೀಟು ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ಹಣ ಹಿಂತಿರುಗಿಸದೆ ಚೆಕ್ ಬೌನ್ಸ್ ಆದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ದೊಡ್ಡಬಳ್ಳಾಪುರದ ಮಾಜಿ ಶಾಸಕ ನರಸಿಂಹಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿದೆ.


ದೂರುದಾರರಿಗೆ 65 ಲಕ್ಷ ರೂ. ಪಾವತಿಸಬೇಕು, ಇಲ್ಲದಿದ್ದರೆ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.


ಬೆಂಗಳೂರಿನ ಪ್ರಕಾಶ್ ಕುಮಾರ್ ಯರಪ್ಪ ದಾಖಲಿಸಿದ ದೂರನ್ನು ವಿಚಾರಣೆಗೆ ಎತ್ತಿಕೊಂಡ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಈ ಆದೇಶ ಹೊರಡಿಸಿದ್ದಾರೆ.


ದೂರುದಾರರಾದ ಪ್ರಕಾಶ್ ತಮ್ಮ ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ನರಸಿಂಹ ಸ್ವಾಮಿ ಪರಿಚಯವಾಯಿತು. ಪ್ರಕಾಶ್ ಪತ್ನಿ ಮತ್ತು ನರಸಿಂಹ ಸ್ವಾಮಿ ಪತ್ನಿ ದೂರದ ಸಂಬಂಧಿಗಳಾಗಿದ್ದು, ಸೀಟು ಕೊಡಿಸುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯ ಮೇರೆಗೆ 25 ರೂ.ಗಳನ್ನು ನರಸಿಂಹ ಸ್ವಾಮಿ ಮನೆಗೆ ತಲುಪಿಸಲಾಗಿತ್ತು.



ಆದರೆ, ನರಸಿಂಹ ಸ್ವಾಮಿ ತಮ್ಮ ಮಗಳಿಗೆ ವೈದ್ಯಕೀಯ ಸೀಟನ್ನೂ ಕೊಡಿಸಿಲ್ಲ, ಹಣವನ್ನೂ ವಾಪಸ್ ಮಾಡಿಲ್ಲ ಎಂದು ದೂರುದಾರರು ಆರೋಪಿಸಿದ್ದರು. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು.




Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200