-->
ಸೌಜನ್ಯ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿರುವ ಹೆಗ್ಗಡೆ, ಧರ್ಮಸ್ಥಳ ಅರ್ಜಿದಾರರು ಕೋರಿರುವುದೇನು..?

ಸೌಜನ್ಯ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿರುವ ಹೆಗ್ಗಡೆ, ಧರ್ಮಸ್ಥಳ ಅರ್ಜಿದಾರರು ಕೋರಿರುವುದೇನು..?

ಸೌಜನ್ಯ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿರುವ ಹೆಗ್ಗಡೆ, ಧರ್ಮಸ್ಥಳ ಅರ್ಜಿದಾರರು ಕೋರಿರುವುದೇನು..?






ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗೆಡೆ ಮತ್ತು ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಕೆ ಆಗಿದೆ.


ಈ ಮೂವರು ಪಕ್ಷಕಾರರ ವಿರುದ್ಧ ಯಾರೂ ಅವಹೇಳನಕಾರಿ ಹೇಳಿಕೆ ನೀಡಬಾರದು ಮತ್ತು ಈ ಬಗ್ಗೆ ಅಧೀನ ನ್ಯಾಯಾಲಯ ನೀಡಿರು ಆದೇಶವನ್ನು ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಈ ಅರ್ಜಿಯಲ್ಲಿ ಕೋರಲಾಗಿದೆ.


ಇದಕ್ಕಿಂತಲೂ ಮಹತ್ವದ್ದೆಂದರೆ, ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆಯನ್ನಾದರೂ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಈ ಅರ್ಜಿಯಲ್ಲಿ ಕೋರಲಾಗಿದೆ.


ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ವೀರೇಂದ್ರ ಹೆಗ್ಗಡೆ ಅವರ ಸಹೋದರನ ಅಳಿಯ ನಂದೀಶ್ ಕುಮಾರ್ ಜೈನ್ ಅವರು ಈ ಅರ್ಜಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಸಲ್ಲಿಸಿದ್ದಾರೆ.


ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಭಾರತೀಯ ನ್ಯಾಯಾಂಗದ ವ್ಯವಸ್ಥೆ ವಿರುದ್ಧವೂ ಆಕ್ಷೇಪಾರ್ಹ ಮಾತುಗಳನ್ನು ಆಡುವ ಮೂಲಕ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

PAY RS 202

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay RS 101

  

Advertise under the article

  

  

  

ನಿಮ್ಮ ಪ್ರೀತಿಯ ಕೋರ್ಟ್ ಬೀಟ್ ನ್ಯೂಸ್ ಗೆ DONATION ನೀಡಲು ಕೆಳಗೆ ಕ್ಲಿಕ್ ಮಾಡಿ

  

Pay Rs 200