-->
ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ: ಕೇಸು ಬಿದ್ದು ಹೋಗಲು ಇದು ಮುಖ್ಯ ಕಾರಣ!

ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ: ಕೇಸು ಬಿದ್ದು ಹೋಗಲು ಇದು ಮುಖ್ಯ ಕಾರಣ!

ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ: ಕೇಸು ಬಿದ್ದು ಹೋಗಲು ಇದು ಮುಖ್ಯ ಕಾರಣ!





ಬಿಜೆಪಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.


ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತು ಆದೇಶ ಹೊರಡಿಸಿದೆ.



ಇಡೀ ಪ್ರಕರಣದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಿಯೇ ಇಲ್ಲ. ಅಥವಾ ಅವರು ಲಂಚ ಸ್ವೀಕರಿಸಿದ್ದರು ಎಂಬ ವಿಚಾರವೇ ಇಲ್ಲ. ಈ ಕಾರಣದಿಂದ ಅವರ ವಿರುದ್ಧದ ಪ್ರಕರಣವನ್ನು ಮುಂದುವರಿಸಲು ಹೇಗೆ ಅನುಮತಿ ನೀಡಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದು ನ್ಯಾಯಪೀಠ ಹೇಳಿದೆ.


ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (Karnataka Soaps And Detergent Ltd-KSDL)ಕ್ಕೆ ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.




Ads on article

Advertise in articles 1

advertising articles 2

Advertise under the article