-->
ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಆದೇಶ

ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಆದೇಶ

ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಕರ್ನಾಟಕ ಹೈಕೋರ್ಟ್ ಆದೇಶ





ರಾಜ್ಯದ ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.


ಈ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆ. ಎಸ್. ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.


ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯ ಮಂಡಳಿಯ ಮುಖ್ಯಸ್ಥರಾಗಿದ್ದ ನ್ಯಾಯಮೂರ್ತಿ ಎಸ್ ಮಹಾಲಕ್ಷ್ಮಿ ನೇರಳೆ ಅವರನ್ನು ರಾಜ್ಯ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.


ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿದ್ದ ನ್ಯಾಯಮೂರ್ತಿ ನಂದಕುಮಾರ್ ಬಿ. ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರನ್ನಾಗಿ ವರ್ಗಾಯಿಸಲಾಗಿದೆ.


ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಉಷಾ ರಾಣಿ ಅವರನ್ನು ಮೈಸೂರಿನ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿದ್ದ ನ್ಯಾಯಮೂರ್ತಿ ಎಚ್ ಆರ್ ರಾಧಾ ಅವರನ್ನು ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.


ಬೆಂಗಳೂರಿನ 53ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾಗಿದ್ದ ಎಸ್. ಗೋಪಾಲಪ್ಪ ಅವರನ್ನು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ತನಿಖಾ ವಿಭಾಗದ ಹೆಚ್ಚುವರಿ ರಿಜಿಸ್ಟ್ರಾರ್ ಆಗಿದ್ದ ನ್ಯಾಯಮೂರ್ತಿ ಹೇಮಾವತಿ ಅವರನ್ನು ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.


ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ

Ads on article

Advertise in articles 1

advertising articles 2

Advertise under the article

  

  

  

Join our WhatsApp Channel Powered By : Online Pudu