-->
ಗ್ರಾಹಕ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ: ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರ ಇಂಗಿತ

ಗ್ರಾಹಕ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ: ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರ ಇಂಗಿತ

ಗ್ರಾಹಕ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ: ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರ ಇಂಗಿತ





ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಗ್ರಾಹಕ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರಾದ ಟಿ.ಜೆ. ಶಿವಶಂಕರೇಗೌಡ ಇಂಗಿತ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ರಾಜ್ಯ ಗ್ರಾಹಕ ಆಯೋಗದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ.ಜೆ. ಶಿವಶಂಕರೇಗೌಡ ಅವರು ಈ ವಿಷಯ ತಿಳಿಸಿದ್ದಾರೆ.


ರಾಜ್ಯ ಆಯೋಗಗಳಲ್ಲಿ ಆಡಳಿತಕ್ಕೆ ಚುರುಕು ನೀಡಬೇಕು. ಖಾಲಿ ಹುದ್ದೆಗಳ ಭರ್ತಿಗೆ ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ಕ್ರಮ ಕೈಗೊಳ್ಳುವುದು ಎಂದು ಅವರು ಹೇಳಿದರು.


ಹೈಕೋರ್ಟ್‌ ರಿಜಿಸ್ಟ್ರಾರ್ ಆಗಿದ್ದ ಸಂದರ್ಭದಲ್ಲಿ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗಿತ್ತು. ಅದೇ ರೀತಿ, ಗ್ರಾಹಕ ಆಯೋಗಗಳಲ್ಲೂ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗುವುದು. ಇನ್ನು ಮುಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.



Ads on article

Advertise in articles 1

advertising articles 2

Advertise under the article