
ವರದಕ್ಷಿಣೆ ಕಿರುಕುಳ ಆರೋಪ: ಸಾಕ್ಷ್ಯರಹಿತ ಬೋಳು ಆರೋಪ ಮಾಡಿದ್ದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ವರದಕ್ಷಿಣೆ ಕಿರುಕುಳ ಆರೋಪ: ಸಾಕ್ಷ್ಯರಹಿತ ಬೋಳು ಆರೋಪ ಮಾಡಿದ್ದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆ ಹಾಸಿಗೆ ಹಿಡಿದಿದ್ದ 80 ವರ್ಷದ ಮಹಿಳೆ ಸೇರಿದಂತೆ ಪತಿ ಹಾಗೂ ಅವರ ಕುಟುಂಬದ ಎಲ್ಲರ ವಿರುದ್ಧ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕು ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅರ್ಜಿ ವಜಾ ಮಾಡಿದೆ.
ದಾವಣಗೆರೆ ವಿಚಾರಣಾ ನ್ಯಾಯಾಲಯದಲ್ಲಿ ಪತ್ನಿ ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಚಿತ್ರದುರ್ಗದ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪತಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಪತ್ನಿ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ಬೋಳು ಆರೋಪಗಳನ್ನು ಮಾತ್ರ ಮಾಡಲಾಗಿದೆ. ವರದಕ್ಷಿಣೆ ಕಿರುಕುಳಕ್ಕೆ ಸಾಕ್ಷ್ಯಗಳನ್ನು ನೀಡಿಲ್ಲ ಎಂದು ನ್ಯಾಯಪೀಠ ಗಮನಿಸಿದೆ.
ಈ ಪ್ರಕರಣದಲ್ಲಿ ನೋಟೀಸ್ ಜಾರಿ ಮಾಡಿದ್ದರೂ ಹೈಕೋರ್ಟ್ ವಿಚಾರಣೆಯಲ್ಲಿ ಪತ್ನಿ ಭಾಗಿಯಾಗಿಲ್ಲ. ವರದಕ್ಷಿಣೆ ತಡೆ ಕಾಯ್ದೆ-1961ರ ಸೆಕ್ಷನ್ 3 ಮತ್ತು 4ರಡಿ ದೂರು ಸಲ್ಲಿಸುವಾಗ ಪಶ್ಚಾತ್ ಪರಿಣಾಮದ ಬಗ್ಗೆ ಮಹಿಳೆ ಯಾವುದೇ ಯೋಚನೆಯನ್ನೂ ಮಾಡಿಲ್ಲ. ಇಂತಹ ಪ್ರಕರಣಗಳನ್ನು ಹೀಗೆಯೇ ಮುಂದುವರಿಯಲು ಬಿಟ್ಟರೆ ಕಾನೂನಿನ ದುರ್ಬಳೆಕಯಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್ ನ್ಯಾಯಪೀಠ, ಪತ್ನಿ ವಿಚಾರಣಾ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದೆ.
ಪ್ರಕರಣ: ಮೊಹಮ್ಮದ್ ಶಮೀರ್ Vs ಕರ್ನಾಟಕ ರಾಜ್ಯ
ಕರ್ನಾಟಕ ಹೈಕೋರ್ಟ್: Crl P 521/2022, 10-05-2022