.jpg)
ಪುಟ ತಿರುವಲು ಎಂಜಲು ಬಳಕೆ: ಹೈಕೋರ್ಟ್ ಕೆಂಡಾಮಂಡಲ- ಎಂಜಲು ಗುರುತಿದ್ದರೆ ಕಡತ ಸ್ವೀಕರಿಸದಂತೆ ನ್ಯಾಯಪೀಠ ನಿರ್ದೇಶನ
ಪುಟ ತಿರುವಲು ಎಂಜಲು ಬಳಕೆ: ಹೈಕೋರ್ಟ್ ಕೆಂಡಾಮಂಡಲ- ಎಂಜಲು ಗುರುತಿದ್ದರೆ ಕಡತ ಸ್ವೀಕರಿಸದಂತೆ ನ್ಯಾಯಪೀಠ ನಿರ್ದೇಶನ
ನ್ಯಾಯಾಲಯದ ಕಡತಗಳ ಪುಟಗಳನ್ನು ತಿರುಗಿಸಲು ಕೆಲ ಸಿಬ್ಬಂದಿ ಲಾಲಾರಸವನ್ನು ಅತ್ಯಂತ ಕೆಟ್ಟ ಹಾಗೂ ಅಸಹ್ಯಕರ ಅಭ್ಯಾಸದಲ್ಲಿ ತೊಡಗಿದ್ದಾರೆ. ಅದರಲ್ಲೂ ಹೆಚ್ಚಿನ ಸಿಬ್ಬಂದಿ ಎಂಜಲು ಬಳಸುವ ಅನೈರ್ಮಲ್ಯ ಪದ್ಧತಿಯಲ್ಲಿ ತೊಡಗಿದ್ದಾರೆ.
ಪಾನ್ ಮಸಾಲಾ ಅಥವಾ ಎಲೆ-ಅಡಿಕೆ ಜಗಿಯುವವರು ಹೀಗೆ ಮಾಡಿದರೆ ಹಾಳೆಯ ಮೇಲೆ ಕೆಂಪು ಕಲೆಗಳಾಗುತ್ತವೆ. ಇದು ಸೋಂಕಿನ ಅಪಾಯ ಒಡ್ಡುತ್ತದೆ ಎಂದು ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶ್ರೀ ಪ್ರಕಾಶ್ ಸಿಂಗ್ ಅವರಿದ್ದ ನ್ಯಾಯಪೀಠ, 'ಎಂಜಲಿನ ಕೆಂಪು ಗುರುತುಗಳಿರುವ ಕಡತಗಳನ್ನು ಸ್ವೀಕರಿಸದಂತೆ ನ್ಯಾಯಾಲಯದ ನೋಂದಣಿ ಹಾಗೂ ಸರ್ಕಾರಿ ಕಾನೂನು ಕಚೇರಿಗಳಿಗೆ ನಿರ್ದೇಶನ ನೀಡಿದೆ.
ಅರ್ಜಿಯೊಂದರ ವಿಚಾರಣೆ ನಡೆಸಲು ಕಡತಗಳನ್ನು ಕೈಗೆತ್ತಿಕೊಂಡ ಪೀಠವು, ಹಾಳೆಗಳಲ್ಲಿ ಕೆಂಪು ಗುರುತುಗಳು ಇರುವುದನ್ನು ಗಮನಿಸಿತು. ಪ್ರತಿ ನಿತ್ಯವೂ ಇದು ಚಾಳಿಯಂತಾಗಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.
'ಎಂಜಲು ಬಳಸಿ ಪುಟ ತಿರುಗಿಸುವ ಈ ಅಸಹ್ಯಕರ ಮತ್ತು ಖಂಡನೀಯ ಅಭ್ಯಾಸವು ವಕೀಲರ ಸಹಾಯಕರು, ನೋಂದಣಿ ಅಧಿಕಾರಿಗಳು ಅಥವಾ ಸರ್ಕಾರಿ ವಕೀಲರ ಕಚೇರಿ ಮತ್ತು ಮುಖ್ಯ ವಕೀಲರ ಕಚೇರಿಗಳಲ್ಲಿ ಕಡತಗಳನ್ನು ಸಿದ್ಧಪಡಿಸುವಾಗ ನಡೆಯುತ್ತಿದೆ' ಎಂದು ಪೀಠವು ತಿಳಿಸಿತು.
'ಈ ಕೊಳಕು ಅಭ್ಯಾಸವನ್ನು ನಿಲ್ಲಿಸದಿದ್ದರೆ, ಇಂಥ ಕಡತಗಳನ್ನು ಮುಟ್ಟುವವರಿಗೆ ಸೋಂಕು ಹರಡ ಬಹುದು. ನ್ಯಾಯಾಲಯದ ಒಳಬರುವ ಎಲ್ಲಾ ಕಡತಗಳು, ಪುಸ್ತಕಗಳು ಹಾಗೂ ಅರ್ಜಿಗಳನ್ನು ಎಚ್ಚರಿಕೆಯಿಂದ ಪರಿ ಶೀಲಿಸಲಾಗಿದೆಯೇ ಎಂದು ಖಚಿತಪಡಿಸ ಕೊಳ್ಳಬೇಕು' ಎಂದು ಹಿರಿಯ ನೋಂದಣಿ ನಿರ್ದೇಶಿಸಿತು. ಅಧಿಕಾರಿಗಳಿಗೆ ನಿರ್ದೇಶಿಸಿತು.